Kannada NewsKarnataka NewsLatest

*ಕಿದ್ವಾಯಿ ನಿರ್ದೇಶಕ ದಿಢೀರ್ ಎತ್ತಂಗಡಿ*

ಪ್ರಗತಿವಾಹಿನಿ ಸುದ್ದಿ: ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವು ಲೋಪದೋಷ ಆರೋಪ, ಔಷಧ ಟೆಂಡರ್ ವಿಚಾರದಲ್ಲಿ ಎಡವಟ್ಟು ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ವಿ.ಲೋಕೇಶ್ ಅವರನ್ನು ರಾಜ್ಯ ಸರ್ಕಾದ ಎತ್ತಂಗಡಿ ಮಾಡಿದೆ.

ಡಾ.ಲೋಕೇಶ್ ಅವರ ಸ್ಥಾನಕ್ಕೆ ನೂತನ ನಿರ್ದೇಶಕರನ್ನಾಗಿ ಡಾ.ಸೈಯದ್ ಅಲ್ತಾಫ್ ಅವರನ್ನು ನೇಮಕ ಮಾಡಲಾಗಿದೆ. ಆಸ್ಪತ್ರೆಯ ವಿರುದ್ಧ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಕಳಪೆ ಚಿಕಿತ್ಸೆ, ಔಷಧ ಟೆಂಡರ್ ನಲ್ಲಿ ಲೋಪ ಸೇರಿದಂತೆ ಸಾಲು ಸಾಲು ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಿದ್ವಾಯಿ ನಿರ್ದೇಶಕರನ್ನು ಎತ್ತಂಗಡಿ ಮಾಡಿ ನೂತನ ನಿರ್ದೇಶಕರನ್ನು ನೇಮಿಸಲಾಗಿದೆ ಎಂದು ತಿಳಿದುಬದಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button