Karnataka NewsLatest

Good News – ಬೆಳಗಾವಿಯಲ್ಲಿ ಕಿದ್ವಾಯಿ ಪ್ರಾದೇಶಿಕ ಕೇಂದ್ರ: ಕೆ ಸುಧಾಕರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ಸರ್ಕಾರವು ಈ ವರ್ಷ ಬೆಳಗಾವಿಯಲ್ಲಿ ಅತ್ಯಾಧುನಿಕ KIDWAI ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದರು.

ಬೆಂಗಳೂರಿನ ಕಿದ್ವಾಯಿ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯಲ್ಲಿ ಕ್ಯಾನ್ಸರ್ ಪೀಡಿತ ಬಡ ಮಕ್ಕಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಸೌಲಭ್ಯಕ್ಕೆ ಚಾಲನೆ ನೀಡಿದ ನಂತರ ಡಾ. ಕೆ.ಸುಧಾಕರ್ ಮಾತನಾಡಿದರು.  ಅಸ್ಥಿಮಜ್ಜೆ ಕಸಿ ಅತ್ಯಂತ ದುಬಾರಿ ಚಿಕಿತ್ಸೆಯಾಗಿದ್ದು, ಬಡ ರೋಗಿಗಳು ಅದನ್ನು ಭರಿಸಲು ಸಾಧ್ಯವಿಲ್ಲ. “ಕಿದ್ವಾಯಿಯಲ್ಲಿನ ಹೊಸ ಸೌಲಭ್ಯವು ಯಾರೂ ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗುವುದಿಲ್ಲ ಎಂದು ಖಚಿತಪಡಿಸುತ್ತದೆ. ಈಗಾಗಲೇ ಇಬ್ಬರು ಮಕ್ಕಳು ಚಿಕಿತ್ಸೆ ಪಡೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಇಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರು ಹೇಳಿದರು.

ತುಮಕೂರು, ಕಲ್ಬುರ್ಗಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಈಗಾಗಲೇ ಪ್ರಾದೇಶಿಕ ಕೇಂದ್ರಗಳನ್ನು ಹೊಂದಿದ್ದೇವೆ. ಬೆಳಗಾವಿಯಲ್ಲಿ ಈ ವರ್ಷ ಆರಂಭವಾಗಲಿದೆ ಎಂದು ಡಾ.ಸುಧಾಕರ್ ಹೇಳಿದರು.

7ನೇ ವೇತನ ಆಯೋಗ ರಚನೆ : ವಿಧಾನಸಭೆಯಲ್ಲಿ CM ಸ್ಪಷ್ಟನೆ

Home add -Advt

Related Articles

Back to top button