Belagavi NewsBelgaum NewsKannada NewsKarnataka NewsNationalPolitics

*ಬಿಜೆಪಿಯಿಂದ ನಾಳೆ “ಕಿತ್ತೂರು ಚಲೋ”*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುರುವಾರ ರಾತ್ರಿ ಕಿತ್ತೂರು ಪಟ್ಟಣ ಪಂಚಾಯಿತಿಯ ಸದಸ್ಯ ನಾಗರಾಜ ಅಸುಂಡಿ ಇವರನ್ನು ಕಾಂಗ್ರೆಸ್ ನ ಪುಂಡರು ಅಪಹರಿಸಿದ್ದನ್ನು ಖಂಡಿಸಿ ನಾಳೆ ಕಿತ್ತೂರು ಚಲೋ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ಗ್ರಾಮಿಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌ 

ಅಧಿಕಾರದ ದುರಾಸೆಯಿಂದ ಕಾಂಗ್ರೆಸ್ ಪಕ್ಷ ಇಂತಹ ಕೃತ್ಯ ಎಸಗಿದ್ದು ಇದರ ಹಿಂದೆ ಸ್ಥಳೀಯ ಶಾಸಕನ ಕೈವಾಡವಿದೆ. ಪಟ್ಟಣ  ಪಂಚಾಯಿತಿ ಸದಸ್ಯನನ್ನು ಅಪಹರಿಸಿದ್ದನ್ನು ಖಂಡಿಸಿ, ಹಾಗೂ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಲ್ಲ ಶಾಸಕನ ವಿರುದ್ಧ ಕಿತ್ತೂರಿನ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button