*ಕಿತ್ತೂರು ಉತ್ಸವ: ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಐತಿಹಾಸಿಕ ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. *ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*