Latest

ಭೀಕರ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಅವಳಿ ಕಂದಮ್ಮಗಳು; ಗಾಯಗೊಂಡಿದ್ದ ತಾಯಿಯೂ ಕೊನೆಯುಸಿರು

ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮೂರು ವರ್ಷದ ಅವಳಿ ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹಾಸನದ ಗವೇನಹಳ್ಳಿ ನಿವಾಸಿ ಜ್ಯೋತಿ ಹಾಗೂ ಆಕೆಯ ಇಬ್ಬರು ಅವಳಿ ಮಕ್ಕಳಾದ 3 ವರ್ಷದ ಪ್ರಣವ್ ಹಾಗೂ ಪ್ರಣತಿ ಮೃತರು. ಶಿವಾನಂದ-ಜ್ಯೋತಿ ದಂಪತಿ ತಮ್ಮ ಇಬ್ಬರು ಅವಳಿ ಮಕ್ಕಳೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಸಿಲುಕಿದ್ದ ಮಕ್ಕಳ ಮೃತದೇಹ ಸುಮಾರು ಮೂರು ಕಿ.ಮೀ ಎಳೆದೊಯ್ಯಲ್ಪಟ್ಟಿದೆ.

ಗಂಭೀರವಾಗಿ ಗಾಯಗೊಂಡಿದ್ದ ಜ್ಯೋತಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನಟಿ ಐಶ್ವರ್ಯಾ ರೈಗೆ ಸಂಕಷ್ಟ: ಇಡಿ ಸಮನ್ಸ್ ಜಾರಿ

Home add -Advt

Related Articles

Back to top button