Belagavi NewsBelgaum NewsEducationKannada NewsKarnataka NewsLatest

*ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ*

ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪ್ರಭಾಕರ ಬಿ. ಕೋರೆಯವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ (Governing Council) ಸಭೆ ನಡೆಯಿತು.

ಸಭೆಯಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ, ನಾವೀನ್ಯತೆ ಹಾಗೂ ಸಂಸ್ಥೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

Home add -Advt

ಸಭೆಯಲ್ಲಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಅಶೋಕ ಎಸ್. ಶೆಟ್ಟರ್, ಕುಲಪತಿಗಳಾದ ಡಾ. ಪ್ರಕಾಶ ಜಿ. ತೇವಾರಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ, ಖ್ಯಾತ ಲೇಖಕಿ, ಸಮಾಜಸೇವಕಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಶ್ರೀಮತಿ ಸುಧಾ ಮೂರ್ತಿ ಸೇರಿದಂತೆ ಆಡಳಿತ ಮಂಡಳಿಯ ಗಣ್ಯ ಸದಸ್ಯರು ಹಾಗೂ ವಿವಿಧ ಘಟಕಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ. ಪ್ರಭಾಕರ ಬಿ. ಕೋರೆಯವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ವೇಳೆ ಶ್ರೀಮತಿ ಸುಧಾ ಮೂರ್ತಿಯವರು ತಮ್ಮ “Tides of Time” ಕೃತಿಯ ಪ್ರತಿಯನ್ನು ಡಾ. ಕೋರೆಯವರಿಗೆ ಉಡುಗೊರೆಯಾಗಿ ನೀಡಿ ಶುಭ ಹಾರೈಸಿದರು. ಈ ಅಪರೂಪದ ಕ್ಷಣವು ಸಭೆಯ ವಿಶೇಷ ಆಕರ್ಷಣೆಯಾಗಿ ಗಮನ ಸೆಳೆಯಿತು.

Related Articles

Back to top button