Latest

*KMC ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಣಿಪಾಲ್ ಹಾಗೂ ಅತ್ತಾವರ ಕೆ ಎಂಸಿ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ 7 ವೈದ್ಯಕೀಯ ವಿದ್ಯಾರ್ಥಿಗಳನ್ನು ಆಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮಣಿಪಾಲ್ ಕೆ ಎಂಸಿ ಆಸ್ಪತ್ರೆಯ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಹಾಗೂ ಅತ್ತಾವರ ಕೆ ಎಂ ಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ಸಮೀರ್ ಅವರನ್ನು ವಜಾಗೊಳಿಸಿ ಕೆ ಎಂ ಸಿ ಆಸ್ಪತ್ರೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳನ್ನು ಮೆಡಿಕಲ್ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ನದೀಯಾ ಸಿರಾಜ್, ಡಾ.ವರ್ಷಿಣಿ ಪ್ರತಿ, ಡಾ.ರಿಯಾ ಚಡ್ಡಾ, ಡಾ.ಇರಾ ಬಾಸಿನ್, ಡಾ.ಕ್ಷಿತಿಜ್ ಗುಪ್ತಾ, ಡಾ.ವಿ.ಎಸ್.ಹರ್ಷಕುಮಾರ್ ಸೇರಿದಂತೆ 7 ವಿದ್ಯಾರ್ಥಿಗಳು ಅಮಾನತುಗೊಂಡವರು.

ಇತ್ತೀಚೆಗೆ ಮಂಗಳೂರು ಪೊಲೀಸರು ಗಾಂಜಾ ನಶೆಯಲ್ಲಿ ತೇಲುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ನಡೆಸಿ ಇಬ್ಬರು ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಸೇರಿ 10 ಜನರನ್ನು ಬಂಧಿಸಿದ್ದರು.

*ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಮತ್ತಿಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ 10 ಲಕ್ಷ ಘೋಷಣೆ*

https://pragati.taskdun.com/bjp-leaderpraveen-nettaru-murder-caseniaannounce-10-lakhtwo-accused-identify/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button