Kannada NewsKarnataka NewsLatest

*ಬಿಸಿಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಬಿರು ಬೇಸಿಗೆ ಅಬ್ಬರ ಜೋರಾಗಿದ್ದು, ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದೆ. ರಣ ಬಿಸಿಲಿನಿಂದಾಗಿ ಜನರು ಬಸವಳಿದು ಹೋಗುತ್ತಿದ್ದಾರೆ.

ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ ಬಿಸಿಲು ಮತ್ತು ಒಣ ವಾತಾವರಣ ಮುಂದುವರೆಯಲಿದೆ. ಕರಾವಳಿ ಕರ್ನಾಟಕ ಹೆಚ್ಚಾಗಿ ಬಿಸಿಲು ಮತ್ತು ಬಿಸಿಲಿನ ವಾತಾವರಣವಿದ್ದು, ಸುತ್ತಲೂ ಹೆಚ್ಚಿನ ಆರ್ದ್ರತೆ ಮತ್ತು ಗರಿಷ್ಠ ತಾಪಮಾನವಿರುತ್ತದೆ. ಶಾಖದ ಅಲೆಗಳ ಅಪಾಯಗಳ ಕಾರಣ, ನಿವಾಸಿಗಳು ನೀರಿನಂಶದಿಂದ ಇರಲು, ಗರಿಷ್ಠ ಸಮಯದಲ್ಲಿ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಎಚ್ಚರಿಕೆ ಕ್ರಮವನ್ನು ನೀಡಲಾಗಿದೆ.

Home add -Advt

ಕಲಬುರಗಿಯಲ್ಲಿ 41°C – 42°C ತೀವ್ರ ತಾಪಮಾನ ದಾಖಲಾಗಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ 40°C ಒಣ ಹವೆ, ಸುಡುವ ಬಿಸಿಲು ಇದೆ. ಬೆಂಗಳೂರಿನಲ್ಲಿ 35°C – 36°C ಇದ್ದು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಳವಾಗಿದೆ.

ಮೈಸೂರು 36°C ಶುಷ್ಕ ವಾತಾವರಣ, ಮಂಗಳೂರು 34°C ಅಧಿಕ ಸೆಖೆ ಇದೆ. ಇನ್ನು ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ‘ರೆಡ್ ಅಲರ್ಟ್’ ಮಾದರಿಯ ಪರಿಸ್ಥಿತಿ ಇದೆ. ಇಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಇಂದು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ UV ಇಂಡೆಕ್ಸ್ 10+ (Extremely High) ದಾಟುವ ನಿರೀಕ್ಷೆಯಿದೆ. ಇದು ನೇರವಾಗಿ ಚರ್ಮಕ್ಕೆ ತಗುಲಿದರೆ ಹಾನಿಕಾರಕ ಎಂದು ಹೇಳಲಾಗಿದೆ.

ಸೂರ್ಯನ ಕಿರಣಗಳಲ್ಲಿ ಅತಿನೇರಳೆ (UV) ಮಟ್ಟ ಹೆಚ್ಚಿರಲಿದ್ದು, ಇದು ಚರ್ಮದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಿ. ಈ ಸಮಯದಲ್ಲಿ ಸೂರ್ಯನ ತಾಪಮಾನ ಮತ್ತು ಶಾಖದ ಅಲೆ ಅತ್ಯಂತ ತೀವ್ರವಾಗಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳನ್ನು ಸೇವಿಸಿ. ಹೊರಗೆ ಹೋಗಲೇಬೇಕಾದ ಅನಿವಾರ್ಯತೆ ಇದ್ದರೆ ಸಡಿಲವಾದ ಹತ್ತಿ ಬಟ್ಟೆ ಧರಿಸಿ, ಛತ್ರಿ ಅಥವಾ ಟೋಪಿಯನ್ನು ಬಳಸಿ ಎಂದು ಹವಾಮಾನ ಇಲಾಖೆ ಇಲಾಖೆ ಅಧಿಕಾರಿಗಳು ಜನರಿಗೆ ಸಲಹೆ ನೀಡಿದ್ದಾರೆ.


Related Articles

Back to top button