Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; ಏಕಾಏಕಿ ಬೈಕ್ ಸವಾರನಿಗೆ ಗುಮ್ಮಿದ ಕೋಲೆ ಬಸವ; ಪವಾಡ ಸದೃಶ ರೀತಿಯಲ್ಲಿ ಬಚಾವ್ ಆದ ಸವಾರ*

ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ಹೋಗುತ್ತಿದ್ದ ಕೋಲೆ ಬಸವ ಎಕಾಏಕಿ ಬೈಕ್ ಸವಾರನಿಗೆ ಗುದ್ದಿದ್ದು, ಆತ ಈಚರ್ ವಾಹನದ ಕೆಳಗೆ ಬಿದ್ದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.

ಮಹಾಲಕ್ಷ್ಮೀ ಲೇಔಟ್ ಸ್ವಿಮ್ಮಿಂಗ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಡೆದು ಬರುತ್ತಿದ್ದ ಕೋಲೆ ಬಸವ ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಎದುರಿನಿಂದ ಬರುತ್ತಿದ್ದ ಐಷರ್ ವಾಹನದ ಕೆಳಗೆ ಬಿದ್ದಿದ್ದಾನೆ. ಈಚರ್ ವಾಹನ ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಬೈಕ್ ಸವಾರ ಬದುಕುಳಿದಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ಅಪಘಾತದ ದೃಶ್ಯ ಎದೆ ಝಲ್ ಎನಿಸುವಂತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button