
ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೊಪ್ಪಳದಲ್ಲಿ ನದೆದಿದೆ.
ಇಲ್ಲಿನ ಪ್ರಶಾಂತ ನಗರದಲ್ಲಿ ಈ ಘಟನೆ ನಡೆದಿದೆ. ದಂಪತಿ ಹಾಗೂ ಪುತ್ರ ಮೂವರೂ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕಾಶ್ ರಾಯ್ಕರ್ (54), ಪತ್ನಿ ಪ್ರಭಾ (46) ಹಾಗೂ ಮಗ ಶಶಾಂಕ್ (21) ಮೃತರು.
ಪ್ರಕಾಶ್ ರಾಯ್ಕರ್ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




