Kannada NewsKarnataka NewsLatest

*ನಾಳೆ ಕೊಪ್ಪಳ ಬಂದ್: ವಿವಿ ಪರೀಕ್ಷೆಗಳು ಮುಂದೂಡಿಕೆ*

ಶಾಲೆಗಳಿಗೆ ರಜೆ ಘೋಷಣೆ

Home add -Advt


ಪ್ರಗತಿವಾಹಿನಿ ಸುದ್ದಿ: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ.

ಸ್ವಯಂಪ್ರೇರಿತ ಬಂದ್‌ ಕರೆಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ‌ ಸ್ವಾಮೀಜಿ ಬಲ್ಡೋಟಾ ಕಾರ್ಖಾನೆ ಶಾಶ್ವತ ಬಂದ್ ಮಾಡಿಸಬೇಕೆಂದು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕರೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕಾರ್ಖಾನೆ ಶಾಶ್ವತವಾಗಿ ಸ್ಥಗಿತಗೊಂಡಿಲ್ಲ. ಈ ಹಿನ್ನಲೆ ಜಂಟಿ ಕ್ರಿಯಾ ಸಮಿತಿ ಬಂದ್​​ಗೆ ಕರೆ ನೀಡಿದೆ ಎಂದು ತಿಳಿಸಿದ್ದಾರೆ.

ಕಳೆದ 116 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪ್ರತಿಭಟನೆ ನಡೆಸಿಕೊಂಡುಬಂದಿದ್ದು, ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರ ವರೆರೆಗೂ ಸ್ವಯಂಪ್ರೇರಿತ ಬಂದ್​​ಗೆಗೆ ಕರೆ ನೀಡಲಾಗಿದೆ. ವಕೀಲರ ಸಂಘ ಸೇರಿ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳ ಒಕ್ಕೂಟ ಸಹ ಹೋರಾಟಗಾರರ ಬೆನ್ನಿಗೆ ನಿಂತಿದೆ. ಭಾಗ್ಯನಗರದಲ್ಲಿ ಬೆಳಿಗ್ಗೆ 7 ಗಂಟೆಗೆ ಬೈಕ್, ಆಟೋ ರ‍್ಯಾಲಿ ನಡೆಯಲಿದ್ದು, 10 ಗಂಟೆಗೆ ಗವಿ ಮಠದಿಂದ ರ‍್ಯಾಲಿ ಇರಲಿದೆ. ಗಡಿಯಾರ ಕಂಬ, ಅಶೋಕ ವೃತ್ತದ ಮೂಲಕ ನಗರಸಭೆಯ ಪ್ರತಿಭಟನಾ ಸ್ಥಳಕ್ಕೆ ತಲುಪಿ ಅದು ಅಂತ್ಯಗೊಳ್ಳಲಿದೆ. ನಗರಸಭೆ ಮುಂಭಾಗ ವೇದಿಕೆ ಕಾರ್ಯಕ್ರಮ‌ ಜರುಗಲಿದ್ದು, ಸಾಣೆಹಳ್ಳಿ, ಗದಗಿನ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳು, ಕಬೀರಾನಾನಂದ ಸ್ವಾಮೀಜಿಗಳು, ಪರಿಸರಕ್ಕಾಗಿ ನಾವು ಸಂಘಟನೆಯ ಎ. ಟಿ. ರಾಮಸ್ವಾಮಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ ತಿಳಿಸಿದ್ದಾರೆ.

Related Articles

Back to top button