Kannada NewsKarnataka NewsLatest
*ಕೆಪಿಸಿಸಿ ವೆಬ್ ಸೈಟ್ ಹ್ಯಾಕ್ ಪ್ರಕರಣ; ನಾಲ್ವರು ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ವಿಧಾನಸಭಾ ಚುನಾವಣೆ ಸಮಯದಲ್ಲಿ ಕೆಪಿಸಿಸಿ ವೆಬ್ ಸೈಟ್ ಹ್ಯಾಕ್ ಮಾಡಿ, ನಕಲಿ ವೆಬ್ ಸೈಟ್ ಸೃಷ್ಟಿಸಿ ಅನಧಿಕೃತ ಪೋಸ್ಟ್ ಹಾಕಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಧರ್ಮೇಶ್ ಜೂನ್, ಅರುಣ್, ಸಿದ್ಧಾರ್ಥ್, ವೆಂಕಟೇಶ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗಿದೆ.
ಈ ನಾಲ್ವರು ಹಾಸನ ಮೂಲದ ಕಂಪನಿಯೊಂದರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ಆರೋಪಿ ವರಾಹೆ ಅನಾಲಿಟಿಕ್ಸ್ ಜೊತೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗುತ್ತಿದೆ.



