Kannada NewsKarnataka NewsLatest

*KPSC ಪರೀಕ್ಷೆಯಲ್ಲಿಯೂ ಅಕ್ರಮ; ಅಭ್ಯರ್ಥಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಈಗ ಕೆಪಿಎಸ್ ಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದ್ದು, ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯೋರ್ವನನ್ನು ಬಂಧಿಸಲಾಗಿದೆ.

ವಿವಿಧ ಇಲಾಖೆಗಳ ನೇಮಕಾತಿಗಾಗಿ ಇಂದು ಹಾಗೂ ನಾಳೆ ಕೆಪಿಎಸ್ ಸಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ ನಡೆದ ಪರೀಕ್ಷೆಯಲ್ಲಿ ಇಂದು ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Home add -Advt

ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿ ಡಾ.ಸುಶೀಲಾ ಬಿ, ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Related Articles

Back to top button