ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಪ್ರಗತಿವಾಹಿನಿ ಸುದ್ದಿ, ಬಾಗಲಕೋಟೆ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭಿವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳದ ಬಳಿ ನಡೆದಿದೆ.

ಇಲ್ಲಿನ ಮುಧೋಳ ಬಳಿಯ ಶಿರೋಳ ಗ್ರಾಮದಲ್ಲಿ ವೇಗವಾಗಿ ಬರುತ್ತಿದ್ದ ಎರಡೂ ವಾಹನಗಳು ತಡರಾತ್ರಿ ಪರಸ್ಪರ ಡಿಕ್ಕಿಹೊಡೆದು ಈ ದುರ್ಘಟನೆ ಸಂಭವಿಸಿದೆ. ಆಪಘಾತದಲ್ಲಿ ಹನುಮಂತ (21), ರಿಯಾಜ್ (25) ಬಾಲಪ್ಪ (34), ಸಿದ್ದರಾಯ (34) ಮೃತಪಟ್ತಿದ್ದಾರೆ. ಮೃತ ವ್ಯಕ್ತಿಗಳು ಗೋಠೆ, ಖಾಜಿ ಬೀಳಗಿ ಗ್ರಾಮದವರು ಎನ್ನಲಾಗಿದೆ.

ಕಾರಿನಲ್ಲಿದ್ದ ನಾಲ್ವರೂ ಧಾರವಾಡಕ್ಕೆ ಹೊರಟಿದ್ದರು. ಟ್ರ್ಯಾಕ್ಟರ್  ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button