Belagavi NewsBelgaum NewsKannada NewsKarnataka News

*ಪಲ್ಟಿಯಾದ KSRTC  ಬಸ್: 17 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ* *ಶಿರಸಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್*

ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಾರಿಗೆ ಸಂಸ್ಥೆಯ  ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಘಟನೆ ನಡೆದಿದೆ.

Home add -Advt

ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು , ಗಂಭೀರ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button