Latest

KSRTC ಬಸ್ ಅಪಘಾತ; ಚಾಲಕ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕೆ ಎಸ್ ಆರ್ ಟಿಸಿ ಬಸ್ ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ.

ಬಸ್ ಲಕ್ಷ್ಮೀಶ್ವರದಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಈ ವೇಳೆ ಶೆರೆವಾಡ ಬಳಿ ಏಕಾಏಕಿ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ. ಬಸ್ ಒಳಗೆ ಸಿಲುಕಿಕೊಂಡ ಚಾಲಕ ಬಸ್ ನಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

https://pragati.taskdun.com/politics/mulayam-singh-yadavno-moreuttar-pradesh-ex-cm/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button