Kannada NewsKarnataka NewsLatest

*ಬೈಕ್ ಸವಾರನ ಮೇಲೆ ಹರಿದ KSRTC ಬಸ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಬೈಕ್ ಸವಾರ ಏಕಾಏಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಬಸ್ ಹರಿದು ಹೋಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜೇಂದ್ರ (45) ಮೃತ ದುರ್ದೈವಿ. ಖಾಸಗಿ ಕಂಪನಿ ಉದ್ಯೋಗಿ. ತುಮಕೂರು ಡಿಪೊ ಕೆ.ಎಸ್.ಆರ್.ಟಿ.ಸಿ ಬಸ್ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ. ಯಶವಂತಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button