
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡಿವೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಇಲ್ಲಿನ ಕೆ.ಆರ್.ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಈ ಅಪಘತ ಸಂಭವಿಸಿದೆ. ಸುನೀಲ್ (34) ಮೃತ ಕಾರು ಚಾಲಕ. ಕಾರಿನಲ್ಲಿದ್ದ ಇನ್ನೋರ್ವ ರಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.