Kannada NewsKarnataka NewsLatest

*KSRTC ಬಸ್ ಹಾಗೂ ಟಾಟಾ ಸುಮೋ ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಗದಗ: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಗುಲಬುರ್ಗಾ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.

Home add -Advt

ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button