*ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಂಡಕ್ಟರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದ ನಿರ್ವಹಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನಮೂಲೆಮಠದ ಬಳಿ ನಡೆದಿದೆ. ಮಹದೇವಸ್ವಾಮಿ (35) ಮೃತ ಕಂಡಕ್ಟರ್. ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದ ಮಹದೇವಸ್ವಾಮಿ, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿನಿ*