Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; KSRTC ಬಸ್ ಡಿಕ್ಕಿಯಾಗಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್, ಓಮಿನಿ ವ್ಯಾನ್ ಗೆ ಡಿಕ್ಕಿಯಾಗಿ ವ್ಯಾನ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಈ ಅಪಘಾತ ಸಂಭವಿಸಿದ್ದು, ಓಮಿನಿ ವ್ಯಾನ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಂಜುಂಡಪ್ಪ (83), ದೇವರಾಜ್ (27), ರಾಕೇಶ್ (30) ಮೃತ ದುರ್ದೈವಿಗಳು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button