*ಮತ್ತೊಂದು ಭೀಕರ ಅಪಘಾತ; KSRTC ಬಸ್ ಡಿಕ್ಕಿಯಾಗಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್, ಓಮಿನಿ ವ್ಯಾನ್ ಗೆ ಡಿಕ್ಕಿಯಾಗಿ ವ್ಯಾನ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಈ ಅಪಘಾತ ಸಂಭವಿಸಿದ್ದು, ಓಮಿನಿ ವ್ಯಾನ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂಜುಂಡಪ್ಪ (83), ದೇವರಾಜ್ (27), ರಾಕೇಶ್ (30) ಮೃತ ದುರ್ದೈವಿಗಳು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಶಾಲಾ ಬಸ್ ಪಲ್ಟಿ; 6 ಮಕ್ಕಳು … Continue reading *ಮತ್ತೊಂದು ಭೀಕರ ಅಪಘಾತ; KSRTC ಬಸ್ ಡಿಕ್ಕಿಯಾಗಿ ಮೂವರು ದುರ್ಮರಣ*