
ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಪ್ರಜೆ ಸಮುದ್ರದಲ್ಲಿ ಈಜಲು ಹೋಗಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ವೇಳೆ ಆತನನ್ನು ರಕ್ಷಿಸಿರುವ ಘತನೆ ಉತ್ತರ ಕನ್ನಡದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕುಡ್ಲೆ ಬೀಚ್ ನಲ್ಲಿ ಕಜಕಿಸ್ತಾನದ ಐದಾಲಿ (25) ಎಂಬ ವಿದೇಶಿ ಪ್ರಜೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀಚ್ ನಲ್ಲಿ ಈಅಜ್ಲು ಹೋಗಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ. ಈ ವೇಳೆ ಮಂಜುನಾಥ್ ಹರಿಕಂತ್ರ, ಗಿರೀಶ್ ಗೌಡ, ನಾಗೇಂದ್ರ ಎಂಬುವವರು ಐದಾಲಿಯನ್ನು ರಕ್ಷಿಸಿದ್ದಾರೆ.
ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



