Kannada NewsKarnataka NewsLatest

*ಬಸ್ ನಿಲ್ದಾಣದ ಬಳಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ; ಕುಮಟಾ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆಡ್ ಬಂದರ್ ಬಳಿ ನಡೆದಿದೆ.

ನಿವೇದಿತಾ ಭಂಡಾರಿ ಆತ್ಮಹತ್ಯೆ ಮಾಡಿಕೊಂದಿರುವ ಮಹಿಳೆ. ಮನೆಯಿಂದ ಇಬ್ಬರು ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಬಂದ ಮಹಿಳೆ ಕುಮಟಾದ ಪಿಕ್ ಅಪ್ ಬಸ್ ನಿಲ್ದಾಣದ ಬಳಿ ಮಕ್ಕಳನ್ನು ಇಳಿಸಿ, ಬಳಿಕ ಮಾಂಗಲ್ಯ ಸರ, ಕಾಲುಂಗುರ, ಮೊಬೈಲ್ ನ್ನು ಸ್ಕೂಟಿ ಒಳಗಿಟ್ಟು, ಸಮುದ್ರಕ್ಕೆ ಹಾರಿದ್ದಾರೆ.

Home add -Advt

ಮಹಿಳೆಸಮುದ್ರಕ್ಕೆ ಜಿಗಿದಿದ್ದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ ಆಕೆಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ಮಹಿಳೆ ಕಣ್ಮರೆಯಾಗಿದ್ದಾರೆ.

ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗಿದೆ.


Related Articles

Back to top button