Belagavi NewsBelgaum NewsNational
*ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಬೆಳಗಾವಿಯ ತಾಯಿ-ಮಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಬೆಳಿಗ್ಗೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬೆಳಗಾವಿಯ ತಾಯಿ ಹಾಗೂ ಮಗಳು ಇಬ್ಬರು ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ವಡಗಾವಿ ಮೂಲದ ಜ್ಯೋತಿ ಹತ್ತರವಾಠ (50) ಪುತ್ರಿ ಮೇಘಾ ಹತ್ತರವಾಠ (25) ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಸಾವನ್ನಪ್ಪಿದ್ದಾರೆ.
ಕಾಲ್ತುಳಿದದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ-ಮಗಳನ್ನು ಪ್ರಯಾಗ್ ರಾಜ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.


