Latest

*ಕಾಂಗ್ರೆಸ್ ಭದ್ರ ಕೋಟೆಯಲ್ಲಿ ಅಮಿತ್ ಶಾ ರೋಡ್ ಶೋ; ಕುಂದಗೋಳದಲ್ಲಿ ಕೇಸರಿ ಕಲರವ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಮತದಾರರ ಓಲೈಕೆಗಾಗಿ ಭರ್ಜರಿ ಕಸರತ್ತು ನಡೆಸಿದ್ದು, ಧಾರವಾಡದ ಕುಂದಗೋಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಕುಂದಗೊಳದಾದ್ಯಂತ ಕೇಸರಿ ಕಲರವ ಆರಂಭವಾಗಿದ್ದು ವಿಜಯಸಂಕಲ್ಪ ಯಾತ್ರೆಯ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡುತ್ತಿದೆ.

ಕುಂದಗೋಳ ಪಟ್ಟಣದ ಕೆರೆಯಂಗಳದಿಂದ 1 ಕೀ.ಮೀ ವರೆಗೆ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ನಡೆದ ರೋಡ್ ಶೋ ಉದ್ದಕ್ಕೂ ಲಕ್ಷಾಂತರ ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದಾರೆ. ರೋಡ್ ಶೋನಲ್ಲಿ ಅಮಿತ್ ಶಾ ಜತೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು.

Related Articles

ಏಲಕ್ಕಿ ಪೇಟ ತೊಟ್ಟು ಅಮಿತ್ ಶಾ ಅವರು ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ರಸ್ತೆಯುದ್ಧಕ್ಕೂ ಇಕ್ಕೆಲಗಳಲ್ಲಿ ಜನಸಾಗರ ಮೆರೆದಿದ್ದು, ಮೋದಿ ಮೋದಿ ಎಂದು ಜಯ ಘೋಷಗಳನ್ನು ಕೂಗಿದ್ದಾರೆ. ಅಮಿತ್ ಶಾ ಎಂಟ್ರಿಯಿಂದಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ.

*ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ*

https://pragati.taskdun.com/bhoomaraddi-college-of-engineering-and-technologyhublicm-basavaraj-bommaiamith-shah/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button