Latest

*ಟಿಕೆಟ್ ಗಾಗಿ ಪೈಪೋಟಿ; ಭಿನ್ನಮತ; ಕಾಂಗ್ರೆಸ್ ಒಳ ಜಗಳಕ್ಕೆ ಪ್ರಜಾಧ್ವನಿ ಸಮಾವೇಶವೇ ರದ್ದು*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ಕಾಂಗ್ರೆಸ್ ಭಿನ್ನಮತ ತಾರಕಕ್ಕೇರಿದೆ. ಕೈ ಟಿಕೆಟ್ ಗಾಗಿ ಒಳಜಗಳದಿಂದಾಗಿ ಪ್ರಜಾಧ್ವನಿ ಸಮಾವೇಶವನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ.

ಕುಂದಗೋಳ ಕಾಂಗ್ರೆಸ್ ನಲ್ಲಿ ಭಿನ್ನಮತ ಶಮನಕ್ಕಾಗಿ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಎಂಟ್ರಿಕೊಟ್ಟಿದ್ದು, ರಾಯರೆಡ್ಡಿ ಮಾತಿಗೂ ಟಿಕೆಟ್ ಆಕಾಂಕ್ಷಿಗಳ ಮನವೊಲಿಕೆಯಾಗಿಲ್ಲ. ಇದರಿಂದಾಗಿ ಫೆ.16ರಂದು ಕುಂದಗೋಳದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಸಮಾವೇಶವೇ ರದ್ದಾಗಿದೆ.

ಶಾಸಕಿ ಕುಸುಮಾಗೆ ಟಿಕೆಟ್ ನೀಡಬಾರದು ಎಂದು ಕೆಲವರು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮನವೊಲಿಕೆಗೆ ರಾಯರೆಡ್ಡಿ ಹರಸಾಹಸ ಪಟ್ಟಿದ್ದಾರೆ. ಆದರೆ ಯಾವುದಕ್ಕೂ ಆಕಾಂಕ್ಷಿಗಳು ಬಗ್ಗುತ್ತಿಲ್ಲ. ಇದರಿಂದಾಗಿ ಪ್ರಜಾಧ್ವನಿ ಸಮಾವೇಶವೇ ರದ್ದಾಗಿದೆ ಎಂದು ತಿಳಿದುಬಂದಿದೆ.

*ಏರೋ ಇಂಡಿಯಾ ಏರ್ ಶೋಗೆ ಪ್ರಧಾನಿ ಮೋದಿ ಚಾಲನೆ; ಬಾನಂಗಳದಲ್ಲಿ ಕಣ್ಮನ ಸೆಳೆದ ಲೋಹದ ಹಕ್ಕಿಗಳ ಚಮತ್ಕಾರ*

https://pragati.taskdun.com/aero-india-show-2023pm-narendra-modiyalahankabangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button