Kannada NewsKarnataka NewsLatest

*ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದುಬಿದ್ದ ಕಲಾವಿದ; ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಪೌರಾಣಿಕ ನಾಟಕ ಪ್ರದರ್ಶನದ ವೇಳೆ ಕಲಾವಿದರೊಬ್ಬರು ವೇದಿಕೆಯ ಮೇಲೆಯೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.

Home add -Advt

ಎನ್.ಮುನಿಕೆಂಪಣ್ಣ (72) ಮೃತ ಕಲಾವಿದ. ಕುರುಕ್ಷೇರ ನಾಟಕ ಪ್ರದರ್ಶನದ ವೇಳೆ ನಾಟಕ ಮಾಡುತ್ತಿದ್ದಾಗಲೇ ಕಲಾವಿದ ಮುನಿಕೆಂಪಣ್ಣ ಕುಸಿದಿಬಿದ್ದಿದ್ದಾರೆ. ಸ್ಥಳದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮುನಿಕೆಂಪಣ್ಣ ದೇವನಹಳ್ಳಿಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ತಡರಾತ್ರಿ ಒಂದು ಗಂಟೆ ಸಮಯದಲ್ಲಿ ನಟಕ ಆಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.


Related Articles

Back to top button