Kannada NewsLatestNationalPolitics

*ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಗೆ ‘ಭಾರತ ರತ್ನ’ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರದಾನ ಮಾಡಿದರು.

ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮೊದಲಾದವರು ಉಪಸ್ಥಿತರಿದ್ದರು.

Home add -Advt

ಭಾರತೀಯ ರಾಜಕೀಯದಲ್ಲಿ ಅನುಭವಿ ರಾಜಕಾರಣಿಯಾಗಿರುವ ಅಡ್ವಾಣಿ, ಏಳು ದಶಕಗಳಿಂದ ಅಚಲವಾದ ಸಮರ್ಪಣೆ ಹಾಗೂ ವಿಭಿನ್ನತೆಯೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕಾಗಿ ಅವರ ಸುದೀರ್ಘ ಮತ್ತು ದಣಿವರಿಯದ ಹೋರಾಟವು 2024ರಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಕಾರಣವಾಯಿತು. ಅಡ್ವಾಣಿಯವರ ಸಾಧನೆಗಳು ಭಾರತದ ಪ್ರತಿಭೆ ಹಾಗೂ ಅಂತರ್ಗತ ಸಂಪ್ರದಾಯಗಳ ಅತ್ಯುತ್ತಮ ಅಭಿವ್ಯಕ್ತಿಯನ್ನು ಒದಗಿಸುತ್ತವೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

Related Articles

Back to top button