Kannada News

ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ನೀಡಿದರೆ ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸುತ್ತಾರೆ ಎಂದ ಸಹೋದರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಶಾಸಕ ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ಇಲ್ಲ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ನಿರಾವರಿ ಖಾತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಹೋದರ ಲಖನ್ ಜಾರಕಿಹೊಳಿ, ರಮೇಶ್ ಗೆ ಜಲಸಂಪನ್ಮೂಲ ನೀಡಿದರೆ ಬಿಜೆಪಿಯನ್ನೇ ನೀರಿನಲ್ಲಿ ಮುಳುಗಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಹಿಂದೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲಾಗುತ್ತದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ ಯಾವುದೇ ಡಿಸಿಎಂ ಹುದ್ದೆ ಸೃಷ್ಟಿಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿ, ಯಾವುದೇ ಹೊಸ ಡಿಸಿಎಂ ಸ್ಥಾನಗಳಿಲ್ಲ ಎಂಬುದನ್ನು ಖಚಿತಪಡಿಸಿದ್ದರು.

ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಲಖನ್, ಉಪಚುನಾವಣೆಗೆ ಮುನ್ನವೇ ನಾವು ರಮೇಶ್​ ಜಾರಕಿಹೊಳಿಗೆ ಯಾವುದೇ ಸಚಿವ ಸ್ಥಾನವು ಸಿಗುವುದಿಲ್ಲ. ಅವರು ಡಿಸಿಎಂ ಕೂಡ ಆಗುವುದಿಲ್ಲ ಎಂದು ಹೇಳಿದ್ದೆವು. ಅವರಿಗೆ ಸ್ಥಾನ ಸಿಗದಿರುವುದರ ಹಿಂದೆ ಮುಖ್ಯಮಂತ್ರಿ, ಬಿಜೆಪಿ ಮುಖಂಡರ ಯಾವುದೇ ತಪ್ಪು ಕೂಡ ಇಲ್ಲ ಎಂದರು.

ಒಂದು ವೇಳೆ ರಮೇಶ್​ ಜಾರಕಿಹೊಳಿಗೆ ನೀರಾವರಿ ಖಾತೆ ನೀಡಿದರೆ ಬಿಜೆಪಿಯನ್ನು ಮುಳುಗಿಸುತ್ತಾರೆ. ಅವರಿಗೆ ಸಣ್ಣ ಕೈಗಾರಿಕೆ ಅಥವಾ ಪೌರಾಡಳಿತ ಖಾತೆ ಕೊಟ್ಟರೆ ಮಾತ್ರ ಬಿಜೆಪಿ ಸರ್ಕಾರ ಸುರಕ್ಷಿತವಾಗಲಿದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button