Kannada NewsKarnataka NewsLatest

ಲಕ್ಷ್ಮಿ ಹೆಬ್ಬಾಳಕರ್ ಜನ್ಮದಿನ: ದೇವಸ್ಥಾನ ಜೀರ್ಣೋದ್ಧಾರಕ್ಕೆ ಧನಸಹಾಯ, ನರೇಗಾ ಕಾರ್ಮಿಕರಿಗೆ ಊಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇಂದು ತಮ್ಮ ಜನ್ಮ ದಿನದ ನಿಮಿತ್ತ ಮೋದಗಾ ನಂತರ ಸಾಂಬ್ರಾದಲ್ಲೂ ನರೇಗಾ ಕಾರ್ಮಿಕರಿಗೆ ಊಟ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.
ಕಾರ್ಮಿಕರ ಆರೋಗ್ಯ ಹಾಗೂ ಕಷ್ಟಗಳನ್ನು ವಿಚಾರಿಸಿದ ಶಾಸಕಿ, ನಿಮ್ಮೊಂದಿಗೆ ಜನ್ಮ ದಿನ ಆಚರಿಸಿಕೊಳ್ಳಲು ಖುಷಿಯಾಗುತ್ತಿದೆ ಎಂದರು. ಶಾಸಕರೊಬ್ಬರು ತಮ್ಮ ಬಳಿ ಬಂದು ಈ ರೀತಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದನ್ನು ಕಂಡ ಕಾರ್ಮಿಕರು, ಹೆಬ್ಬಾಳಕರ್ ಅವರ ಸರಳತೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ, ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಹುಟ್ಟು ಹಬ್ಬದ ನಿಮಿತ್ಯ ಗ್ರಾಮದ ಹಿರಿಯರ ಆಶೀರ್ವಾದ ಪಡೆದು,  ಶ್ರೀ ಮಾರುತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐದು ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು. ಇದರ ಜೊತೆಗೆ ನಿಲಜಿ ಗ್ರಾಮದ ಶ್ರೀ ಜೀಜಾ ಮಾತಾ ದೇವಸ್ಥಾನ ಜೀರ್ಣೋದ್ಧಾರಕ್ಕೂ ಕೂಡ ಮೂರುವರೆ ಲಕ್ಷ ರೂ.ಗಳ ಚೆಕ್ ನ್ನು ಹಸ್ತಾಂತರಿಸಿದರು.
ಒಟ್ಟಾರೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅತ್ಯಂತ ವಿಶಿಷ್ಟವಾಗಿ ಮತ್ತು ಅರ್ಥಪೂರ್ಣವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.
ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 

 

ದುಡಿಯುವ ವರ್ಗವೆಂದರೆ ನನಗೆ ಎಲ್ಲಿಲ್ಲದ ಅಕ್ಕರೆ -ಲಕ್ಷ್ಮಿ ಹೆಬ್ಬಾಳಕರ್

ಕಾಳಜಿಯಿಂದ ಆರೋಗ್ಯ ಕಾಪಾಡಿಕೊಳ್ಳಿ – ಲಕ್ಷ್ಮಿ ಹೆಬ್ಬಾಳಕರ್ ಕರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button