Kannada NewsKarnataka NewsLatest

ಸ್ವಂತ ಖರ್ಚಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮುಂದಾದ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಬೆಳಗಾವಿ ಗ್ರಾಮೀಣ​ ​ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ​  ಶ್ರೀ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗಳ ಕ್ವಾಲಂ ಪೂಜೆಗೆ​ ಶನಿವಾರ​ ಚಾಲನೆಯನ್ನು ನೀಡ​ಲಾಯಿತು​.
​  ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ  ಸ್ಥಳೀಯ ಜನಪ್ರತಿನಿಧಿಗಳು, ​ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ದೇವಸ್ಥಾನದ ಕಮೀಟಿಯರು ಸೇರಿ​ ಪೂಜೆ ನೆರವೇರಿಸಿದರು.
ಶ್ರೀ ಗುಡದಮ್ಮ ದೇವಸ್ಥಾನದ ಕಲ್ಯಾಣ ಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು, ಗ್ರಾಮಸ್ಥರ ಬೇಡಿಕೆಯಂತೆ ಅವರ ಬೇಡಿಕೆಗಳಿಗೆ ಸ್ಪಂದಿಸಿ, ​ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವ್ಯಯಕ್ತಿಕ ಖರ್ಚಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿ ಕೊಡ​ಲು ಮುಂದಾಗಿದ್ದಾರೆ.​
ಕಲ್ಯಾಣ ಮಂಟಪ ನಿರ್ಮಾಣದ ಗುಣಮಟ್ಟ​ದ​ ಬಗ್ಗೆ ​ಮತ್ತು ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿಗಳನ್ನು ​ಪೂರ್ಣಗೊಳಿಸುವ ಕುರಿತು ಲಕ್ಷ್ಮಿ ಹೆಬ್ಬಾಳಕರ್ ಸೂಚನೆಯನ್ನು ನೀಡಿದ್ದಾರೆ. ತಮ್ಮ ಬೇಡಿಕೆಗೆ ಸ್ಪಂದಿಸಿರುವ, ವಯಕ್ತಿಕವಾಗಿ ಹಣ ನೀಡುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ​ಮೃಣಾಲ ಹೆಬ್ಬಾಳಕರ್, ತೌಸಿಫ್ ಫನಿಬಂದ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಕಮೀಟಿಯ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button