Kannada NewsKarnataka NewsLatest

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಂತಾಪ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಜಯಪುರದ ಷಣ್ಮುಖಾರೂಢ ಮಠ ವಿಜಯಪುರ ಹಾಗೂ ಹುಬ್ಬಳ್ಳಿಯ  ಶಾಂತಾಶ್ರಮದ ಅಭಿನವ ಶಿವಪುತ್ರ ಮಹಾಸ್ವಾಮಿಗಳ ನಿಧನಕ್ಕೆ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
 ಈ ಕುರಿತು ಹೇಳಿಕೆ ನೀಡಿರುವ ಅವರು,  ಸ್ವಾಮಿಗಳು ಲಿಂಗೈಕ್ಯರಾಗಿರುವ ವಿಷಯ ತಿಳಿದು  ದುಃಖವಾಗಿದೆ. ಅವರೊಬ್ಬ ಆದರ್ಶ ಮಠಾಧೀಶರಾಗಿದ್ದರು. ಉತ್ತಮ ಮಾರ್ಗದರ್ಶಕರಾಗಿದ್ದರು. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಿ, ಮಾರ್ಗದರ್ಶಕರಾಗಿ ನಿಲ್ಲುತ್ತಿದ್ದರು. ಅವರ ಅಗಲಿಕೆಯಿಂದ ತುಂಬಲಾರದ ನಷ್ಠ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button