
ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಭಾನುವಾರ ನಡೆದ ವೋಟ್ ಚೋರ್ ಗದ್ದಿ ಚೋಡ್ ರ್ಯಾಲಿ ವೇಳೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಸಂವಾದ ನಡೆಸಿದರು.
ರ್ಯಾಲಿಯಲ್ಲಿ ಭಾಗವಹಿಸಲು ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸಂಜೆಯೇ ನವದೆಹಲಿಗೆ ತೆರಳಿದ್ದಾರೆ.
ಭಾನುವಾರ ನಡೆದ ರ್ಯಾಲಿಯಲ್ಲಿ ಪುತ್ರ ಮೃಣಾಲ ಹೆಬ್ಬಾಳಕರ್ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ಕಾರ್ಯಕರ್ತರೊಂದಿಗೆ ಭಾಗವಹಿಸಿದ್ದರು.



