Belagavi NewsBelgaum NewsKarnataka NewsLatest

*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.

Home add -Advt

ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಗೃಹ ಕಚೇರಿಗೆ ಆಗಮಿಸಿ ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಒಳಗೊಂಡ ಅರ್ಜಿಗಳನ್ನು ಸಲ್ಲಿಸಿದರು.

ಪ್ರತಿಯೊಬ್ಬರ ಸಮಸ್ಯೆಗಳನ್ನು ಸಹನೆಯಿಂದ ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅರ್ಜಿಗಳಲ್ಲಿರುವ ವಿಷಯಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ವಸತಿ, ಕಂದಾಯ, ಪಿಂಚಣಿ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು.
ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ಸಂದರ್ಭದಲ್ಲಿ ಅಧಿಕಾರಿಗಳು ನಿಯಮಾನುಸಾರ ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ತುರ್ತು ಸ್ವರೂಪದ ಸಮಸ್ಯೆಗಳಿಗೆ ಆದ್ಯತೆ ನೀಡಿ ಶೀಘ್ರ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

“ಜನರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಪರಿಹಾರ ಕಲ್ಪಿಸುವುದು ನಮ್ಮ ಜವಾಬ್ದಾರಿ. ಯಾವುದೇ ಅರ್ಹ ವ್ಯಕ್ತಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸಬಹುದು” ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

जनतेच्या समस्या जाणून घेत लक्ष्मी हेब्बाळकर
बेळगाव : माजी मंत्री तथा बेळगाव ग्रामीण मतदारसंघाच्या आमदार लक्ष्मी हेब्बाळकर यांनी मंगळवारी बेळगाव येथील आपल्या गृह कार्यालयात नागरिकांच्या समस्या जाणून घेत त्यांच्या तक्रारींना प्रतिसाद दिला.
बेळगाव ग्रामीण मतदारसंघासह जिल्ह्याच्या विविध भागांतून मोठ्या संख्येने नागरिक गृह कार्यालयात दाखल झाले. त्यांनी आपल्या वैयक्तिक तसेच सार्वजनिक समस्यांबाबत अर्ज साद केले.
लक्ष्मी हेब्बाळकर यांनी प्रत्येक नागरिकाची समस्या संयमाने ऐकून घेत अर्जातील विषयांची पाहणी केली. तसेच संबंधित अधिकाऱ्यांशी चर्चा करून आवश्यक कार्यवाहीबाबत सूचना दिल्या.
पिण्याचे पाणी, रस्ते, गटारी, वीज, निवास, महसूल, पेन्शन, सरकारी योजना व सुविधांसह विविध समस्यांबाबत नागरिकांनी निवेदने सादर केली. काही समस्यांबाबत त्यांनी संबंधित अधिकाऱ्यांना दूरध्वनीवरून माहिती देत तातडीने कार्यवाही करण्याच्या सूचना दिल्या.
नागरिकांनी मांडलेल्या समस्यांची नियमानुसार तपासणी करून पात्र लाभार्थ्यांना सरकारी योजना व सुविधांचा लाभ मिळेल, याची दक्षता घेण्याचे निर्देश त्यांनी अधिकाऱ्यांना दिले. तातडीच्या स्वरूपाच्या समस्यांना प्राधान्य देऊन लवकरात लवकर तोडगा काढण्याच्या सूचनाही त्यांनी केल्या.
“जनतेच्या समस्या ऐकून घेऊन शक्य तितका तोडगा काढणे ही आपली जबाबदारी आहे. कोणताही पात्र नागरिक सरकारी सुविधांपासून वंचित राहता कामा नये. नागरिकांनी आपल्या समस्या थेट आमच्यापर्यंत मांडाव्यात,” असे लक्ष्मी हेब्बाळकर यांनी सांगितले.
यावेळी युवक काँग्रेसचे नेते मृणाल हेब्बाळकर यांच्यासह काँग्रेसचे पदाधिकारी व कार्यकर्ते उपस्थित होते.
नागरिकांशी थेट संवाद साधून त्यांच्या समस्या जाणून घेतल्याबद्दल लक्ष्मी हेब्बाळकर यांच्या या उपक्रमाचे स्थानिक नागरिकांनी कौतुक केले.

Related Articles

Back to top button