Kannada NewsKarnataka NewsLatest
ಲಕ್ಷ್ಮಿ ತಾಯಿ ಸೌಹಾರ್ದ ಸೊಸೈಟಿ ಮೂಲಕ ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ – ಲಕ್ಷ್ಮಿ ಹೆಬ್ಬಾಳಕರ್

ಲಕ್ಷ್ಮಿ ತಾಯಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲಕ್ಷ್ಮಿ ತಾಯಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮೂಲಕ ಮುಂದಿನ ದಿನಗಳಲ್ಲಿ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶಿಸಲಾಗುವುದು. ತನ್ಮೂಲಕ ರೈತರು, ಬಡವರಿಗೆ ಕೈಗೆಟಕುವ ದರದಲ್ಲಿ ಶಿಕ್ಷಣ ಮತ್ತು ವೈದ್ಯಕೀಯ ಸೇವೆ ಒದಗಿಸಲಾಗುವುದು ಎಂದು ಸೊಸೈಟಿಯ ಗೌರವಾಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ರೈತರಿಗೆ ಅಗತ್ಯ ಉಪಕರಣಗಳನ್ನು ಖರೀದಿಸಲು, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ನೀಡಲಾಗುವುದು ಎಂದೂ ಅವರು ಹೇಳಿದರು.


ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಸಹಕಾರಿ ಸಂಘ ಆರಂಭಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಬೈಲಹೊಂಗಲದಲ್ಲೂ ಶಾಖೆಯನ್ನು ಆರಂಭಿಸಿದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಸಂಸ್ಥೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ ಹಾಗೂ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ನಿರ್ದೇಶಕರೆಲ್ಲರೂ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ