GIT add 2024-1
Laxmi Tai add
Beereshwara 33

ಭಾರೀ ಭೂ ಕುಸಿತಕ್ಕೆ ಒಂದೇ ಕುಟುಂಬದ ನಾಲ್ವರ ಸಾವು

ಮಲಗಿದ್ದ ಸ್ಥಳದಲ್ಲೇ ಜೀವಂತ ಸಮಾಧಿಯಾದ ಕುಟುಂಬಸ್ಥರು

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಇಟಾನಗರ: ದೇಶದ ವಿವಿಧ ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆ ಅಬ್ಬರದ ನಡುವೆ ಅರುಣಾಚಲಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿ 8 ತಿಂಗಳ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಮಳೆಯಿಂದಾಗಿ ಕೆಲ ದಿನಗಳಿಂದ ಅರುಣಾಚಲಪ್ರದೇಶದಲ್ಲಿ ಭೂಕುಸಿತವುಂತಾಗುತ್ತಿದ್ದು, ಇಂದು ಮಧ್ಯಾಹ್ನ ಪಪುಂಪರೆ ಜಿಲ್ಲೆಯ ತಿಗ್ದೋ ಗ್ರಾಮದಲ್ಲಿ ಭೂ ಕುಸಿತದಿಂದಾಗಿ ಈ ದುರ್ಘಟನೆ ಸಂಭವಿಸಿದೆ.

Emergency Service

ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ವಿಷಯ ತಿಳಿದ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಿಎಂ ಪೇಮ ಖಂಡು, ಮೃತ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.

Bottom Add3
Bottom Ad 2