GIT add 2024-1
Laxmi Tai add
Beereshwara 33

ಕೊರೊನಾದಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು

ನೆರೆಹೊರೆಯವರಿಂದ ತಾತ್ಸಾರ ಹಿನ್ನಲೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಕಾರವಾರ: ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದರೂ ಕೂಡ ಸಮಾಜ ತನ್ನನ್ನು ತಾತ್ಸಾರ ಹಾಗೂ ಸಂಶಯದಿಂದ ನೋಡುತ್ತಿದೆ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರದಲ್ಲಿ ನಡೆದಿದೆ.

ಇಲ್ಲಿನ ಶಿರವಾಡದ ಹೆಳೆಕೋಟ್ ನಿವಾಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಒಂದು ತಿಂಗಳ ಹಿಂದೆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಪಡದು ಗುಣಮುಖರಾಗಿ ಮನೆಗೆ ಬಂದಿದ್ದರು.

Emergency Service

ಮನೆಗೆ ಬಂದ ವ್ಯಕ್ತಿಯನ್ನು ಗ್ರಾಮಸ್ಥರು ತಾತ್ಸಾರವಾಗಿ ನೋಡಲು ಆರಂಭಿಸಿದ್ದರು. ನೆರೆಹೊರೆಯವರ ವರ್ತನೆಯಿಂದ ನೊಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‍ಐ ರೇವಣ ಸಿದ್ದಪ್ಪ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

 

Bottom Add3
Bottom Ad 2