GIT add 2024-1
Laxmi Tai add
Beereshwara 33

ತಿರುಪತಿಯಲ್ಲಿ ಕರ್ನಾಟಕ ಭವನ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಬಿಎಸ್ ವೈ

ಶ್ರೀವಾರಿ ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡ ಯಡಿಯೂರಪ್ಪ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ತಿರುಪತಿ: ರಾಜ್ಯದ ಭಕ್ತರ ಅನುಕೂಲಕ್ಕಾಗಿ ತಿರುಪತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ ಟಿಟಿಡಿ ಚೇರ್ಮನ್ ಸುಬ್ಬಾ ರೆಡ್ಡಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಗಣ್ಯರು ಹಾಜರಿದ್ದರು.

Emergency Service

ಕರ್ನಾಟಕದಿಂದ ತೆರಳುವ ಭಕ್ತರ ವಾಸ್ತವ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 7.5 ಎಕರೆ ಪ್ರದೇಶದಲ್ಲಿ ಕರ್ನಾಟಕ ಭವನದ ನಾಲ್ಕು ಕಟ್ಟಗಳು ನಿರ್ಮಾಣವಾಗುತ್ತಿದ್ದು, ಸಂಪಿಗೆ, ಸೇವಂತಿಗೆ, ತಾವರೆ ಮತ್ತು ಮಲ್ಲಿಗೆ ಎಂದು ಈ ಕಟ್ಟಡಕ್ಕೆ ಹೆಸರಿಡಲಾಗುತ್ತಿದೆ. ಈ ನಾಲ್ಕು ಹೊಸ ಕಟ್ಟಡ ನಿರ್ಮಾಣ ಹೊಣೆಯನ್ನು ಟಿಟಿಡಿ ವಹಿಸಿಕೊಂಡಿದೆ.

ಇನ್ನು ಕರ್ನಾಟಕ ಭವನ ಶಂಕು ಸ್ಥಾಪನೆಗೂ ಮುನ್ನ ಸಿಎಂ ಯಡಿಯೂರಪ್ಪ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲದೇ ಶ್ರೀವಾರಿ ಬ್ರಹ್ಮೋತ್ಸವದಲ್ಲಿ ಭಾಗವಹಿಸಿದರು.

Bottom Add3
Bottom Ad 2