Latest
ಬಸವೇಶ್ವರ ಪುತ್ಥಳಿ ಶಂಕುಸ್ಥಾಪನೆ ಮಾಡಿದ ರಮೇಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ:
ತಾಲೂಕಿನ ಮಮದಾಪುರ ಗ್ರಾಮದಲ್ಲಿ ಗ್ರಾಮಸ್ಥರಿಂದ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಸ್ಥಾಪನೆಯ ಶಂಕುಸ್ಥಾಪನೆಯನ್ನು ಶಾಸಕ ರಮೇಶ ಜಾರಕಿಹೊಳಿ ಶನಿವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಚರಮೂರ್ತೇಶ್ವರ ಸ್ವಾಮಿಜಿ, ಮೌನ ಮಲ್ಲಿಕಾರ್ಜುನ ಸ್ವಾಮಿಜಿ, ಶಾಂತಾರೂಢ ಸ್ವಾಮಿಜಿ, ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ಟಿ ಆರ್ ಕಾಗಲ, ತಾಪಂ ಸದಸ್ಯ ಸಿದ್ದಪ್ಪ ಕಮತ, ಗ್ರಾಪಂ ಅಧ್ಯಕ್ಷೆ ನಾಗವ್ವ ಸಿಂಗಾಡಿ, ಉಪಾಧ್ಯಕ್ಷ ಹನಮಂತ ಗೋಪಾಳಿ, ಶಂಕರಗೌಡ ಪಾಟೀಲ, ಮಮದಾಪೂರ, ಮರಡಿ ಶಿವಾಪೂರ, ಅಜ್ಜನಕಟ್ಟಿ, ದುಂಡಾನಟ್ಟಿ ಗ್ರಾಮಗಳ ಹಿರಿಯರು, ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.




