
ಪ್ರಗತಿವಾಹಿನಿ ಸುದ್ದಿ, ಹಗರಿಬೊಮ್ಮನಹಳ್ಳಿ – ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಶನಿವಾರ ಬೆಳಗಾವಿ ಶಾಸಕರೂ, ಕೆಪಿಸಿಸಿ ವಕ್ತಾರರೂ ಆದ ಲಕ್ಷ್ಮಿ ಹೆಬ್ಬಾಳಕರ್ ಪಾಲ್ಗೊಂಡಿದ್ದರು.

ಕೂಡಲಸಂಗಮದಿಂದ ಬೆಂಗಳೂರು ವಿಧಾನಸೌಧದ ಆಡಳಿತ ಪೀಠದವರೆಗೆ ಹಮ್ಮಿಕೊಂಡ ಪಂಚಲಕ್ಷ ಹೆಜ್ಜೆಗಳ ಬೃಹತ್ ಐತಿಹಾಸಿಕ ಪಾದಯಾತ್ರೆ ಶನಿವಾರ ಹಗರಿಬೊಮ್ಮನಹಳ್ಳಿಯವರೆಗೆ ತಲುಪಿದೆ.
ಶನಿವಾರ ಪಾದಯಾತ್ರೆಯಲ್ಲಿ ಪಾಲ್ಗೊಂಡ ಲಕ್ಷ್ಮಿ ಹೆಬ್ಬಾಳಕರ್, ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಲ್ಲದೆ ಶ್ರೀಗಳ ಆಶಿರ್ವಾದ ಪಡೆದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ನಡೆದ ಪ್ರತಿಭಟನಾ ಧರಣಿಯಲ್ಲೂ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಪಾಲ್ಗೊಂಡು ಬೆಂಬಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.