Kannada NewsKarnataka NewsLatest

ಮಾಂಗಲ್ಯಂ ತಂತು ನಾನೇನ…. ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ಕೈ ಹಿಡಿದ ಡಾ.ಹಿತಾ – ವಿಡೀಯೋ ಸಹಿತ ಸುದ್ದಿ

First in Pragativahini

 

ಪ್ರಗತಿವಾಹಿನಿ ಸುದ್ದಿ, ಪಣಜಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ, ರಾಜ್ಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಮತ್ತು ಭದ್ರಾವತಿಯ ಬಿ.ಕೆ.ಶಿವಕುಮಾರ ಪುತ್ರಿ ಡಾ.ಹಿತಾ ವಿವಾಹ ಗೋವಾದ ಲೀಲಾ ಪ್ಯಾಲೇಸ್ ಹೊಟೆಲ್ ನಲ್ಲಿ ಇದೀಗ ನೆರವೇರಿದೆ.

ವಿನಯ ಗುರೂಜಿ, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮುಖಂಡರಾದ ಯು.ಟಿ.ಖಾದರ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಅಶೋಕ ಪಟ್ಟಣ, ಶಾಸಕಿ ಅಂಜಲಿ ನಿಂಬಾಳಕರ್, ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಮೃಣಾಲ್ ಅವರು ಹಿತಾ ಅವರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದರು.

ಕಳೆದ 4 ದಿನಗಳಿಂದ ವಿವಾಹ ಪೂರ್ವ ಕಾರ್ಯಕ್ರಮಗಳೆಲ್ಲ ನಡೆದು ಶುಕ್ರವಾರ ವಿವಾಹ ಶಾಸ್ತ್ರ ನೆರವೇರಿತು.

ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಪೂರ್ವ ಕಾರ್ಯಕ್ರಮದ ಫೋಟೋ ಝಲಕ್

ಬೇಸರದ ಮಧ್ಯೆಯೇ ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಕಾರ್ಯಕ್ರಮ ಆರಂಭ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button