Kannada NewsKarnataka NewsLatest

*BREAKING: ಹೆಚ್.ಎಂ.ರೇವಣ್ಣ ಪುತ್ರನ ಕಾರು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ್ ಒದೆತನದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಲಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ೨೭ ವರ್ಷದ ರಾಜೇಶ್ ಮೃತ ಯುವಕ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ಅಪಘಾತದ ವೇಳೆ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ್ ಕೂಡ ಕಾರಿನಲ್ಲಿ ಇದ್ದರು. ಆದರೆ ಕಾರನ್ನು ಚಾಲಕ ಓಡಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button