Latest

ಸಂಘರ್ಷದ ಬೆನ್ನಲ್ಲೇ ಪರಿಷತ್ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ನಲ್ಲಿ ಉಪಸಭಾಪತಿಯನ್ನು ಎಳೆದಾಡಿ, ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ನಡೆದ ಗದ್ದಲ-ಕೋಲಾಹಲ ಬೆನ್ನಲ್ಲೇ ಪರಿಷತ್ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ.

ಸಭಾಪತಿ ಕುರ್ಚಿಯಲ್ಲಿ ಆಸೀನರಾಗಿದ್ದ ಉಪಸಭಾಪತಿ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದಾರೆ. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕೈಕೈ ಮಿಲಾಯಿಸಿಕೊಂಡಿದ್ದಾರೆ. ಕಲಾಪದಲ್ಲಿ ಗದ್ದಲ ಕೋಲಾಹಲ ತಾರಕಕ್ಕೇರಿದ ಬೆನ್ನಲ್ಲೇ ಒಳಗೆ ಬಂದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ್ದಾರೆ.

Home add -Advt

ಬೆಲ್ ಹೊಡೆಯುವ ಮೊದಲೇ ಸದನದಲ್ಲಿ ಶಿಷ್ಠಾಚಾರ ಉಲ್ಲಂಘಿಸಿ ಉಪಸಭಾಪತಿ ಧರ್ಮೇಗೌಡ ಸಭಾಪತಿ ಪೀಠ ಅಲಂಕರಿಸಿದ್ದೇ ಸಂಘರ್ಷಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

Related Articles

Back to top button