
ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರು ಜಿಲ್ಲೆಯ ಬನ್ನೂರ್ ಸಮೀಪದಲ್ಲಿರುವ ಯಾಚೇನಹಳ್ಳಿ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.
ಪಟೇಲ್ ಕ್ಯಾತೆಗೌಡರ ಕಬ್ಬಿನ ಗದ್ದೆಗೆ ಸಂಜೆ ತೆರಳಿದಾಗ ರೈತರು ಮರಿಗಳನ್ನು ಗಮನಿಸಿದ್ದಾರೆ. ತಾಯಿ ಚಿರತೆ ಮರಿಗಳನ್ನು ಬಿಟ್ಟು ಬೇಟೆಯಾಡಲು ಹೋಗಿರಬಹುದು ಎಂದು ಊಹಿಸಲಾಗಿದೆ.
ಚಿರತೆ ಮರಿಗಳು ಪತ್ತೆಯಾಗಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
*ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ; ಶ್ವಾನದಳ, ಬಾಂಬ್ ಪತ್ತೆ ದಳದಿಂದ ಪರಿಶೀಲನೆ*
https://pragati.taskdun.com/bangalore-nps-schoolbomb-threat/