Belagavi NewsBelgaum NewsKarnataka News
*ಬುದ್ಧಿವಾದ ಹೇಳಿದ ತಂದೆ-ತಾಯಿ ಮಾತಿಗೆ ಬೇಸರ: ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಕಾಲೇಜಿಗೆ ಹೋಗು ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ ತುಕಾರಾಂ ಕುರಾಡೆ (20) ಎಂದು ಗುರುತಿಸಲಾಗಿದೆ. ಸಾಗರ ಸದಲಗಾ ಸರಕಾರಿ ಕಾಲೇಜಿನಲ್ಲಿ ಬಿ.ಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ.
ಈತ ಕೆಲ ದಿನದಿಂದ ಕಾಲೇಜಿಗೆ ಹೋಗದೆ ಅಲೆಯುತ್ತಿದ್ದ. ಇದನ್ನು ಗಮನಿಸಿದ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವಕ ಮನೆಯ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.