Latest

ಕೃಷ್ಣಾ, ಭೀಮಾ ನದಿಗಳಿಗೆ ನೀರು ಬಿಡುಗಡೆ ಮಾಡಲು ಮಹಾ ಸರಕಾರಕ್ಕೆ ಪತ್ರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಾರಾಷ್ಟ್ರದ ವಾರಣಾ/ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ಕುಡಿವ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರ ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದೆ.

ಈ ಕುರಿತು ಕರ್ನಾಟಕ ಸರಕಾರದ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮಹಾರಾಷ್ಟ್ರ ಸರಕಾರದ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕಪೂರ್ ಅವರಿಗೆ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಕಲಬುರಗಿ, ರಾಯಚೂರು, ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಗಳು ನೀರಿನ ಕೊರತೆ ಎದುರಿಸುತ್ತಿವೆ. ಕರ್ನಾಟಕದ ಹಿಪ್ಪರಗಿ ಬ್ಯಾರೇಜ್ ನಲ್ಲಿರುವ ನೀರಿನ ಸಂಗ್ರಹ ಮಳೆಗಾಲದ ಆರಂಭದವರೆಗೆ ಪೂರೈಕೆಗೆ ಸಾಕಾಗುವುದಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯಲು ಸರಬರಾಜು ಮಾಡುವಷ್ಟು ನೀರಿನ ದಾಸ್ತಾನು ಇರುವುದರಿಂದ ಮಹಾರಾಷ್ಟ್ರದ ಜಲಾಶಯಗಳಿಂದ ಎರಡೂ ನದಿಗಳಿಗೆ ತಲಾ 3 ಟಿಎಂಸಿ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.

Home add -Advt
https://pragati.taskdun.com/let-people-be-aware-of-congress-bjp-alignment-punjab-cm-bhagwant-mann/
https://pragati.taskdun.com/akash-ganga-revives-historic-waterless-well/
https://pragati.taskdun.com/goa-is-not-a-small-state-it-is-like-vermilion-on-the-forehead-of-mother-india-amit-shah/

Related Articles

Back to top button