National

*ಸಿಡಿಲು ಬಡಿದು CRPF ಅಧಿಕಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಡಿಲು ಬಡಿದು ಸಿಆರ್ ಪಿಎಫ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಇಲ್ಲಿನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯ ಕೆರಿಬುರು ಅರಣ್ಯ ಪ್ರದೇಶದಲ್ಲಿ ನಕ್ಲಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಸಿಡಿಲು ಬಡಿದು ಅಧಿಕಾರಿ ಬಲಿಯಾಗಿದ್ದಾರೆ.

ಮೃತ ಅಧಿಕಾರಿಯನ್ನು ಮಹಾರಬಮ್ ಪ್ರಬೋ ಸಿಂಗ್ (46) ಎಂದು ಗುರುತಿಸಲಾಗಿದೆ. ಎರಡನೇ ದರ್ಜೆಯ ಕಮಾಂಡರ್ ಆಗಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

Home add -Advt

Related Articles

Back to top button