Belagavi NewsBelgaum NewsKarnataka News

*ಜೂನ್ 12 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಕಾಗವಾಡ ತಾಲೂಕಿನ, ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳ ಸಮಕ್ಷಮದಲ್ಲಿ ಗುರುವಾರ (ಜೂನ್.12) ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾಗವಾಡ ತಾಲೂಕಿನ ಪಿ.ಡಬ್ಲ್ಯು.ಡಿ. ಇಲಾಖೆಯ ಐ.ಬಿ.ಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಬಹುದಾಗಿದೆ ಮತ್ತು ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿ ಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0831-2950756, 0831-2421922, ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button