Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ದಾಖಲೆ ಇಲ್ಲದ 16 ಲಕ್ಷ ಹಣ ಜಪ್ತಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷ ಲಕ್ಷ ಹಣಗಳನ್ನು ಪ್ರತಿ ದಿನ ಚುನಾವಣಾ ಅಧಿಕಾರಿಗಳು ಸೀಜ್ ಮಾಡುತ್ತಿದ್ದಾರೆ.

Home add -Advt

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.

ಇಚಲಕರಂಜಿ ಮೂಲದ ಸಂತೋಷ್ ಪೂಜಾರಿ ಹಾಗೂ ಜ್ಞಾನೇಶ್ವರ್ ಪಾಟೀಲ್ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು. ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Related Articles

Back to top button